Friday, October 3, 2008

ಸುದ್ದಿಮಾತು ಸಂಪಾದಕೀಯ...

ಸುದ್ದಿಮಾತು ಮಾತನಾಡಲು ಆರಂಭಿಸಿ ವಾರಗಳೇ ಉರುಳಿ ಹೋದವು. ಓದುಗರಲ್ಲಿ ನೂರೆಂಟು ಅನುಮಾನಗಳು. ನಾವು ನಿರೀಕ್ಷಿಸಿದಂತೆ, ಪತ್ರಕರ್ತ ಸಮೂಹವೇ ಬ್ಲಾಗ್ ನ ಬಹುತೇಕ ಓದುಗರು. ಬ್ಲಾಗ್ ಗೆ ಭೇಟಿ ಕೊಟ್ಟವರೆಲ್ಲ, view my complete profile ಮೇಲೆ ಮರೆಯದೆ ಕ್ಲಿಕ್ ಮಾಡಿದರು. ಖಾಲಿ-ಖಾಲಿ ಇದ್ದದ್ದನು ಕಂಡು 'ಯಾರಿರಬಹುದು' ಎಂದು ಲೆಕ್ಕಾಚಾರಕ್ಕೆ ಶುರುಹಚ್ಚಿದರು.
'ಯಾರೋ ನಮ್ಮ ಮಧ್ಯೆ ಇರೋ ಪತ್ರಕರ್ತನೇ ಇಂತಹ ಕೆಲಸ ಮಾಡುತ್ತಿರಬೇಕು' ಎಂದು ಹಲವರು ಅಂದುಕೊಂಡದ್ದೂ ಬ್ಲಾಗ್ ಕಿವಿಗೆ ಕೇಳಿಸಿದೆ. ಬ್ಲಾಗ್ ಪ್ರತಿದಿನ update ಆಗುತ್ತೆ ಅಂದರೆ, 'ಯಾವನೋ ಕೆಲಸ ಇಲ್ಲದ ಆಸಾಮಿ ಇರಬೇಕು'; 'ಪದೇ ಪದೇ ಯಡಿಯೂರಪ್ಪನ್ನ ಬಯ್ಯೋದು ನೋಡಿದರೆ ಇವ ಕಾಂಗ್ರೆಸ್ ನವನೋ, ಎಡಪಂಥೀಯವನೋ ಇರಬೇಕು'; ಪತ್ರಿಕಾ ಭಾಷೆ ಬಗ್ಗೆ, ಪತ್ರಕರ್ತರ ಅವಾಂತರಗಳ ಬಗ್ಗೆ ಬರೆಯೋದು ನೋಡಿದ್ರೆ 'ಯಾರೋ ಪತ್ರಕರ್ತನೇ ಇರಬೇಕು...' ಹೀಗೆ ಹತ್ತಾರು ಊಹೆಗಳು ಓದುಗರಲ್ಲಿ ಎದ್ದಿರುವುವುದು ಸಹಜ.
ಈ ಎಲ್ಲಾ ಸಂಶಯಗಳಿಗೆ ಉತ್ತರ ನೀಡುವ ಸಮಯ ಈಗ ಬಂದಿದೆ. ಮೊದಲನೆಯದಾಗಿ ಇದು ಯಾರೋ ಒಬ್ಬ ಮಾಡುತ್ತಿರುವ ಬ್ಲಾಗ್ ಅಲ್ಲ. ಐದು ಮಂದಿ ಇದ್ದೇವೆ. ನಾವ್ಯಾರೂ ಪತ್ರಕರ್ತರಲ್ಲ. ಹಾಗಂತ ಪತ್ರಿಕೋದ್ಯಮ ಪರಿಚಯ ಇಲ್ಲ ಅಂತಲ್ಲ. ನಾವೆಲ್ಲರೂ ಬೇರೆ ಬೇರೆ ಪತ್ರಿಕೆಗಳಲ್ಲಿ 4-5 ವರ್ಷ ಕಾಲ ಕೆಲಸ ಮಾಡಿ ಈಗ ಬೇರೆಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದೇವೆ. ಹಾಗಾಗಿ ಪತ್ರಿಕೋದ್ಯಮದೆಡೆಗೆ ಇಂಥ ಕಾಳಜಿ. ಪತ್ರಿಕೆ, ಪತ್ರಿಕೋದ್ಯಮ ಬಗ್ಗೆನೇ ಬರೆದರೆ ಹೇಗೆ ಅಂತ ನಾವೆಲ್ಲಾ ಕೂಡಿ ನಿರ್ಧಾರ ಮಾಡಿ ಬ್ಲಾಗ್ ಆರಂಭಿಸಿದೆವು.
ನಮ್ಮ ಹೆಸರು ಯಾಕೆ ಹೇಳ್ತಿಲ್ಲ ಅನ್ನೋದು ನಿಮ್ಮ ಪ್ರಶ್ನೆ ಇರಬಹುದು. ಆದರೆ ಹೆಸರಲ್ಲೇನಿದೆ? ಹೆಸರು ಹೇಳಿದ್ರೆ - ಇವ ಘಟ್ಟದ ಕೆಳಗಿನವನು, ಅವನು ಉತ್ತರ ಕರ್ನಾಟಕದವನು, ಮತ್ತೆ ಅವನೋ ಮಹಾನ್ ಚಡ್ಡಿ, ಇನ್ನೊಬ್ಬನೋ ಆ ಜಾತಿಯವನು.. ಹೀಗೆ ಏನೇನೋ ಕಾರಣ ಕೊಟ್ಟು ಬರಹಗಳನ್ನು ಓದೋ ಸನ್ನಿವೇಶ ಸೃಷ್ಟಿಯಾಗುತ್ತೆ. ಅದೆಲ್ಲಾ ಯಾಕೆ?
Ronald Bartes ಹೇಳೋ ಹಾಗೆ author is dead. ಬ್ಲಾಗ್ ನಲ್ಲೂ ಹಾಗೆ. ಬರಹಗಾರರಿಗೆ ಅಸ್ತಿತ್ವವಿಲ್ಲ. ಬರಹಗಳಿಗೆ ಮಾತ್ರ ಆಧಾರ ಇರುತ್ತೆ. ಬದ್ಧತೆ ಇರುತ್ತೆ. ನಿಮಗನ್ನಿಸಿದ್ದನ್ನ ನಮ್ಮೊಂದಿಗೆ ಹೇಳಿಕೊಳ್ಳಿ..
ಅಂದಹಾಗೆ ಯಾರನ್ನು ಬಯ್ಯುವ ಉದ್ದೇಶ ನಮ್ಮದಲ್ಲ. ತಪ್ಪು ಮಾಡಿದಾಗ ಸುದ್ದಿಮಾತು ಆಡಿಕೊಳ್ಳುತ್ತದೆ. ಸರಿ ಮಾಡಿದಾಗ ಮೆಚ್ಚಿಕೊಳ್ಳುತ್ತದೆ. ಹಾಗೆಯೇ ರಂಜನೆಯು ಇರಲಿ ಎಂದು ಇನ್ನುಮುಂದೆ ಪ್ರತಿ ಶುಕ್ರವಾರ "ಸಿನಿಮಾತು" ನಿಮ್ಮ ಬ್ಲಾಗ್ ಅಂಗಳದಲ್ಲಿ.

4 comments:

sugandhi said...

ಇಷ್ಟು ಬೇಗ ರಹಸ್ಯ ಸ್ಫೋಟಿಸಬಾರದಿತ್ತು. ನೀವು ಮಾಧ್ಯಮಗಳ ಮೇಲೆ ಕಣ್ಣಿಟ್ಟು ಹೊಡೆಯುತ್ತಿದ್ದುದನ್ನು ನೋಡಿ ಪತ್ರಕರ್ತರೇ ಈ ಬ್ಲಾಗ್ ಆರಂಭಿಸಿರಬೇಕು ಎಂದುಕೊಂಡಿದ್ದೆವು.
ಏನೇ ಆಗಲಿ, ನಿಮ್ಮ ಸುದ್ದಿಮಾತು ಸಂಚಲನವನ್ನೇ ಹುಟ್ಟಿಸಿದೆ. ಅದಕ್ಕಾಗಿ ಅಭಿನಂದನೆಗಳು. ನಿಮ್ಮ ಐದೂ ಜನರ ಕೈಗಳು ಎಂದೂ ದಣಿಯದಿರಲಿ. ನಮ್ಮ ಕಣ್ಣುಗಳು ಯಾವಾಗಲೂ ತಣಿಯುತ್ತಿರಲಿ.

Anonymous said...

olle prayatna....baiyuvudar jotege kannada tv madhyam dalli chennagi bhashe olle suddi koduvavar baggenu bareyiri....tegaluvudu irali jotege bennu tattuuva kelasavu agle beku...

Anonymous said...

nammolage samshaya bittittu e nimma blog. nimma hage chintisuva vyaktigallella "ivane irbeku suddimaatu blog odeya" emba anuman bittitu. sadya neevu yarendu heli (eshtu nijavo..)punya katti kondidiri..
nimma prayatnavantu prashamsege arha..
keep it up..
-obba patrakarta..

Anonymous said...

tv news room nallela nimma blognade suddi...olledu nijavageeyu olle prayatna....adre dayvaittu chennagi dynamic agi patrikodyamad ashaygalannu itkondu kelasa maduvavar tv yalli report maduvavar baggenu positive stories irli...illandre neev bari teekisidre monotonous agatte...ravi belgere anaknad reetiyalli